Saturday, February 27, 2010

0

ಹೊಸಬಗೆಯ ಸವಾಲುಗಳಿಗೆ ವಿದ್ಯಾರ್ಥಿಗಳು ಸಜ್ಜಾಗಬೇಕು- ಪ್ರೊ.ಎಂ.ಎನ್. ಚೆಟ್ಟಿಯಾರ್

  • Saturday, February 27, 2010
  • ಡಾ.ಶ್ರೀಧರ ಎಚ್.ಜಿ.
  • Share
  • ಫೆಬ್ರವರಿ ೨೧ : ಇಂದಿನದು ಸ್ಪರ್ಧಾತ್ಮಕ ಯುಗ. ಸಾಂಪ್ರದಾಕ ಪದವಿಯೊಂದಿಗೆ ವಿಷಯಕ್ಕೆ ಪೂರಕವಾದ ಹೆಚ್ಚುವರಿ ಮಾಹಿತಿಯನ್ನು ಇಂದಿನ ವಿದ್ಯಾರ್ಥಿಗಳು ಪಡೆಯುವ ಅಗತ್ಯವಿದೆ. ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ತರಬೇತಿಯ ಅಗತ್ಯವಿದೆ. ಹೊಸ ಬಗೆಯ ಸವಾಲುಗಳಿಗೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಎಲ್ಲರ ಜವಾಬ್ದಾರಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ.ಎನ್. ಚೆಟ್ಟಿಯಾರ್ ಹೇಳಿದರು.

    ಅವರು ವಿವೇಕಾನಂದ ಕಾಲೇಜಿನ ಇಂಗ್ಲಿಷ್ ವಿಭಾಗದ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಯು.ಜಿ.ಸಿ. ನೆಟ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
    ಅನ್ಯಶಿಸ್ತುಗಳ ಅರಿವು, ಶೈಕ್ಷಣಿಕ ಬರವಣಿಗೆಯಲ್ಲಿನ ಸಾಂದ್ರ ಅನುಭವ, ವಿಭಿನ್ನ ರೀತಿಯ ಬರವಣಿಗೆಯ ಶೈಲಿ ವಿದ್ಯಾರ್ಥಿಗಳನ್ನು ಯಶಸ್ಸಿನ ಕಡೆಗೆ ಮುನ್ನಡೆಸಬಲ್ಲದು ಎಂದು ತರಬೇತಿ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಡಾ. ಕಲ್ಯಾಣಿ ವಲ್ಲತ್ಸ್, ತಿರುವನಂತಪುರ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ಪ್ರೊ. ಎ.ವಿ.ನಾರಾಯಣ ವಹಿಸಿದ್ದರು. ವೇದಿಕೆಯಲ್ಲಿ ಪ್ರೊ. ಬಾಲಕೃಷ್ಣ ನಾಯರ್ ಉಪಸ್ಥಿತರಿದ್ದರು.

    ಕಾರ್ಯಕ್ರಮದ ಆರಂಭದಲ್ಲಿ ಡಾ. ಎಚ್. ಮಾಧವ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ವಪ್ನ ಕಾರ್ಯಕ್ರಮ ನಿರ್ವಹಣೆ ಮಾಡಿ ವಂದಿಸಿದರು. ವಲ್ಲತ್ಸ್ ಟೋಟಲ್ ಇಂಗ್ಲಿಷ್ ಸಲ್ಯೂಶನ್ಸ್ ತಿರುವನಂತಪುರ ಕಾರ್ಯಾಗಾರವನ್ನು ನಡೆಸಿಕೊಟ್ಟರು.

    0 Responses to “ಹೊಸಬಗೆಯ ಸವಾಲುಗಳಿಗೆ ವಿದ್ಯಾರ್ಥಿಗಳು ಸಜ್ಜಾಗಬೇಕು- ಪ್ರೊ.ಎಂ.ಎನ್. ಚೆಟ್ಟಿಯಾರ್”

    Subscribe